Friday, April 18, 2025

ಆಸ್ಕರ್ ಫೆರ್ನಾಂಡಿಸ್ ಬದುಕು ಇತರರಿಗೆ ಮಾದರಿ: ರಮಾನಾಥ ರೈ

by eesamachara
0 comment

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಮಾತನಾಡಿ, ಲೋಕಸಭಾ, ರಾಜ್ಯಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ, ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಆಸ್ಕರ್ ಫೆರ್ನಾಂಡಿಸ್ ಅವರು  ಸಾಮಾನ್ಯ ಕಾರ್ಯಕರ್ತರಂತೆ ಗುರುತಿಸಿಕೊಂಡಿದ್ದರು. ಮೃದು, ಪ್ರಾಮಾಣಿಕ ವ್ಯಕ್ತಿಯಾಗಿದ್ದ ಅವರು ಓರ್ವ ಅಜಾತ ಶತ್ರು.  ಎಲ್ಲರ ಜೊತೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಿದ್ದರು. ಅವರ ಬದುಕು ಇತರ ನಾಯಕರಿಗೆ ಮಾದರಿ. ರಾಜ್ಯಕ್ಕೆ ಅವರ ಕೊಡುಗೆ ಅಪಾರ ಎಂದು ಸ್ಮರಿಸಿಕೊಂಡರು.

ಈ ಸಂದರ್ಭ ಇಬ್ರಾಹೀಂ ಕೋಡಿಜಾಲ್, ಎಸ್.ಅಪ್ಪಿ, ಜೆ.ಅಬ್ದುಲ್ ಸಲೀಂ, ನವೀನ್ ಡಿಸೋಜ, ಶಾಹುಲ್ ಹಮೀದ್, ಶುಭೋದಯ ಆಳ್ವ, ಟಿ.ಹೊನ್ನಯ್ಯ, ನೀರಜ್ ಚಂದ್ರಪಾಲ್, ಲತೀಫ್ ಕುಂದಕ್, ಸಬಿತಾ ಮಿಸ್ಕಿತ್, ಜೆಸಿಂತಾ ಆಲ್ಫ್ರೆಡ್, ಕವಿತಾ ವಾಸು, ಸಂಶುದ್ದೀನ್ ಬಂದರ್, ಅಶ್ರಫ್ ಬಜಾಲ್, ಮುಹಮ್ಮದ್ ಅಲ್ತಾಫ್ ಸುರತ್ಕಲ್, ಸುಹಾನ್ ಆಳ್ವ, ಡಿ.ಎಂ.ಮುಸ್ತಫಾ, ಭಾಸ್ಕರ್ ರಾವ್,  ಶಬ್ಬೀರ್ ಎಸ್, ನಝೀರ್ ಬಜಾಲ್, ವಿಕಾಶ್ ಶೆಟ್ಟಿ, ಲಕ್ಷ್ಮಣ್ ಶೆಟ್ಟಿ, ಶಮೀರ್ ಪಜೀರ್, ಟಿ.ಕೆ.ಸುಧೀರ್, ಸೋನ್ ಡಿಸೋಜ, ಫಯಾಝ್ ಅಮ್ಮೆಮ್ಮಾರ್, ಮಂಜುಳಾ ನಾಯಕ್, ಸಮರ್ಥ್ ಭಟ್, ಇಮ್ರಾನ್ ಎ.ಆರ್, ಚಂದ್ರಕಲಾ ಜೋಗಿ, ಸುರೇಶ್ ಪೂಜಾರಿ ಕುಳಾಯಿ, ಯಶವಂತ ಪ್ರಭು ಮತ್ತಿತರು ಉಪಸ್ಥಿತರಿದ್ದರು.

ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios