Friday, June 6, 2025

ಕಾರ್ಯಕರ್ತರ ವಿರೋಧಕ್ಕೆ ಸಚಿವ ಬೈರತಿ ಸುರೇಶ್ ಗೆ ಮೋಹನ್ ಆಳ್ವ ಏರ್ಪಡಿಸಿದ್ದ ಉಪಹಾರ ಕೂಟ ರದ್ದು

by eesamachara
0 comment

ಮೂಡಬಿದ್ರೆ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ಗುರುತಿಸಿಕೊಂಡಿದ್ದ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಮೋಹನ್ ಆಳ್ವ ನಿವಾಸದಲ್ಲಿ ಇಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಆಯೋಜಿಸಿದ್ದ ಉಪಹಾರ ಕೂಟಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ವರದಿಯಾಗಿದೆ.

ಇಂದು ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳ ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ  ನಗರಕ್ಕೆ ಆಗಮಿಸಿದ್ದ ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಮೋಹನ್‌ ಆಳ್ವ ಅವರ ನಿವಾಸದಲ್ಲಿ ಬೆಳಗ್ಗಿನ ಉಪಾಹಾರ ಕೂಟವನ್ನು ಏರ್ಪಡಿಸಲಾಗಿತ್ತು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ನೇರವಾಗಿ ಬಿಜೆಪಿಯನ್ನು ಬೆಂಬಲಿಸಿದವರ ಮನೆಗೆ ಹೋಗುವುದು ಸರಿಯಲ್ಲ ಎಂಬ ಮಾತು ಕೇಳಿ ಬಂದಿತ್ತು. ಸಚಿವರೊಂದಿಗಿನ ಕಾರ್ಯಕ್ರಮದಲ್ಲಿ ಭಾಗಿಯಾಗದೇ ದೂರು ಉಳಿಯುವ ಎಚ್ಚರಿಕೆ ಕೂಡ ಕಾರ್ಯಕರ್ತರು ನೀಡಿದ್ದರು ಎನ್ನಲಾಗಿದೆ.

ಮೋಹನ್ ಆಳ್ವ ಅವರು ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಮೂಡಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಪ್ರಚಾರ ನಡೆಸಿ ಅವರ ಉಮೇದುವಾರಿಕೆ ಸಲ್ಲಿಸುವಾಗಲೂ ಜೊತೆಗಿದ್ದು ಸುದ್ದಿಯಾಗಿದ್ದರು.   

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios