Friday, April 18, 2025

ಕುಮಾರಸ್ವಾಮಿಯ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  

by eesamachara
0 comment

ರಾಮನಗರ: ಬಿ.ವೈ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಿತ್ರ ಪಕ್ಷ ಜೆಡಿಎಸ್ ವರಿಷ್ಠ, ಮಾಜಿ ಮಖ್ಯಮಂತ್ರಿ ಎಚ್.​ಡಿ ಕುಮಾರಸ್ವಾಮಿ ಅವರನ್ನು ರವಿವಾರ ಭೇಟಿ ಮಾಡಿದ್ದಾರೆ.

ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ನಾನು ಜವಾಬ್ದಾರಿ ತೆಗದುಕೊಂಡ‌ ನಂತರ ಮಾಜಿ ದೇವೇಗೌಡ ಭೇಟಿ‌ ಮಾಡಿ ಚರ್ಚೆ ಮಾಡಿದ್ದೇನೆ. ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಿದ್ದೇನೆ. ದೇಶದ ಭವಿಷ್ಯ ರೂಪಿಸುವ ಲೋಕಸಭೆ ಚುನಾವಣೆ. ಹೀಗಾಗಿ 28 ಕ್ಷೇತ್ರಕ್ಕೆ 28 ಕ್ಷೇತ್ರಗಳಲ್ಲಿ ಬಿಜೆಪಿ , ಜೆಡಿಎಸ್ ಗೆಲ್ಲುವುದಕ್ಕೆ ಹೊರಟಿದೆ. ಈ ಮೈತ್ರಿಯನ್ನು ಲೋಕಸಭೆ ಮಾತ್ರವಲ್ಲದೇ ಈ ರಾಜ್ಯ ಸರ್ಕಾರದ ವಿರುದ್ಧವೂ ಮುಂದವರಿಸಲಿದ್ದೇವೆ.  ಆ‌ ನಿಟ್ಟಿನಲ್ಲಿ ಮಾತುಕತೆ ಮಾಡಿದ್ದೇವೆ ಎಂದು ತಿಳಿಸಿದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios