Wednesday, April 16, 2025

ಡಿಕೆಶಿ ಪ್ರಕರಣ: ಕೋರ್ಟ್​ನಲ್ಲಿ ಹೋರಾಟ ಮಾಡುತ್ತೇವೆ ಎಂದ ಈಶ್ವರಪ್ಪ

by eesamachara
0 comment

ಹಾವೇರಿ: ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯುವ ಮೂಲಕ ಸಚಿವ ಸಂಪುಟದ ಪಾವಿತ್ರ್ಯತೆಯನ್ನು ಹಾಳು ಮಾಡಿದೆ. ಈ ಕುರಿತು ನಾವು ಕೂಡಾ ಕೋರ್ಟ್​ನಲ್ಲಿ ಹೋರಾಟ ಮಾಡುತ್ತೇವೆ. ಸಿಬಿಐಗೆ ಕೊಟ್ಟಿದ್ದ ಅನುಮತಿ ಸರ್ಕಾರ ಹಿಂಪಡೆದಿದ್ದನ್ನು ಕೋರ್ಟ್ ಒಪ್ಪಲ್ಲ. ಕೋರ್ಟ್​ಗೆ ಹೆಚ್ಚಿನ ದಾಖಲೆ ನೀಡುವ ಸಂದರ್ಭ ಬಂದರೆ ಒದಗಿಸುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ವರ್ಗಾವಣೆ ದಂಧೆ ನಡೆಯುತ್ತಿದ್ದು, ನನ್ನ ಬಳಿ ದಾಖಲೆಗಳಿವೆ. ಪ್ರಕರಣವನ್ನು ನ್ಯಾಯಾಂಗ ತನಿಖೆ ಮಾಡಿಸಿದರೆ ದಾಖಲೆಗಳನ್ನು ಕೊಡುತ್ತೇನೆ. ಕಾಂಗ್ರೆಸ್ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದೆ. ಮುಂದಿನ ಚುನಾವಣೆಯಲ್ಲಿ ಜನ ಬುದ್ದಿ ಕಲಿಸುತ್ತಾರೆ. ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ರಕ್ಷಣೆ ಕೊಡುತ್ತಿದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಇಬ್ಬರೂ ಸೇರಿಕೊಂಡು ಲೂಟಿ ಹೊಡೆಯುತ್ತಿದ್ದಾರೆ. ಲಂಚ ಪಡೆದು ಉನ್ನತ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios