Friday, June 6, 2025

ಬಿಜೆಪಿ ಸರ್ಕಾರ ಡಿಕೆಶಿ ಪ್ರಕರಣವನ್ನು ತರಾತುರಿಯಲ್ಲಿ ಸಿಬಿಐಗೆ ವಹಿಸಿದೆ: ಪ್ರಿಯಾಂಕ್ ಖರ್ಗೆ

by eesamachara
0 comment

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ಪ್ರಕರಣವನ್ನು ಚಾರ್ಜ್‌ಶೀಟ್ ಅಥವಾ ಎಫ್‌ಐಆ‌ರ್ ದಾಖಲಿಸುವ ಮುನ್ನವೇ ಸಿಬಿಐಗೆ ವಹಿಸಿದ್ದು ಏಕೆ? ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವ ಮುನ್ನ ಬಿಜೆಪಿ ನಾಯಕರು ಕೇಂದ್ರ ಸೂಚಿಸಿದ ನಿಯಮಗಳನ್ನು ಪಾಲಿಸಿಲ್ಲ.  ಡಿ.ಕೆ. ಶಿವಕುಮಾ‌ರ್ ವಿರುದ್ಧ ಕಾನೂನುಬಾಹಿರವಾಗಿ ನೀಡಲಾಗಿದ್ದ ಸಿಬಿಐ ಮಂಜೂರಾತಿಯನ್ನು ನಾವು ಹಿಂಪಡೆಯುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಡಿ.ಕೆ. ಶಿವಕುಮಾರ್ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದೇ ಕಾನೂನುಬಾಹಿರವಾಗಿತ್ತು. ಈ ಪ್ರಕರಣವನ್ನು ಹಿಂದಿನ ಬಿಜೆಪಿ ಸರ್ಕಾರ ನಿಯಮಗಳನ್ನು ಪಾಲಿಸದೆ ತರಾತುರಿಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಡಿ.ಕೆ. ಶಿವಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಲು ಬಿಜೆಪಿ ಅಕ್ರಮವಾಗಿ ಸಿಬಿಐಗೆ ಅನುಮತಿ ನೀಡಿದೆ. ವಿರೋಧ ಪಕ್ಷಗಳ ಧ್ವನಿ ಅಡಗಿಸಲು, ವಿರೋಧ ಪಕ್ಷದ ನಾಯಕರಿಂದ ಎದುರಾಗುವ ತೊಂದರೆ ದಮನಿಸಲು ಆಪರೇಷನ್ ಕಮಲ ಹಾಗೂ ಐಟಿ, ಈಡಿ, ಸಿಬಿಐ ಮೂಲಕ ಬೆದರಿಕೆ ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಇದು ರಾಜಕೀಯ ಪ್ರೇರಿತ ಎಂದು ದೂರಿದರು.

ಡಿ.ಕೆ. ಶಿವಕುಮಾ‌ರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ (PMLA) ಅಡಿಯಲ್ಲಿ ತನಿಖೆ ಆರಂಭಿಸಿರುವುದಾಗಿ ಜಾರಿ ನಿರ್ದೇಶನಾಲಯವು 9-9-2019 ರಂದು ಸರ್ಕಾರಕ್ಕೆ ಪತ್ರ ಬರೆದಿತ್ತು. ಇದು ಮಾಹಿತಿಗಾಗಿ ಮಾತ್ರ ಶಾಸನಬದ್ಧ ಪತ್ರವಾಗಿತ್ತು. 11- 09-2019 ರಂದು ಮುಖ್ಯ ಕಾರ್ಯದರ್ಶಿಯವರು ಡಿಪಿಎಆರ್‌ಗೆ ಪತ್ರವನ್ನು ಕಳುಹಿಸಿದ್ದಾರೆ. ಪ್ರಕರಣವು ಡಿಪಿಎಆ‌ರ್ ವ್ಯಾಪ್ತಿಯನ್ನು ಮೀರಿದೆ. ಅವರು ಎರಡು ಪ್ರಶ್ನೆಗಳನ್ನು ಕೇಳುತ್ತಾರೆ. ಮೊದಲಿಗೆ, ನಾವು ಸ್ಪೀಕ‌ರ್ ಅನುಮತಿ ಮತ್ತು ಅಡ್ವಕೇಟ್ ಜನರಲ್ (ಎಜಿ) ಅಭಿಪ್ರಾಯವನ್ನು ಪಡೆಯಬೇಕು. ನಂತರ ಕಡತವನ್ನು ಗೃಹ ಇಲಾಖೆಗೆ ವರ್ಗಾಯಿಸಲಾಯಿತು. 16-09- 2019 ರಂದು ಅಧಿಕಾರಿಗಳು ಮುಖ್ಯಮಂತ್ರಿಯವರ ಮುಂದೆ ಕಡತವನ್ನು ಇಡಲು ನಿರ್ಧರಿಸಿದರು. ನಂತರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಜಿಗೆ ಪತ್ರ ಬರೆದು ಅಭಿಪ್ರಾಯ ಕೇಳುತ್ತಾರೆ. 24-09-2019 ರಂದು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ಸರ್ಕಾರ ನಿರ್ಧರಿಸಿತು. ಎಜಿ ಅಭಿಪ್ರಾಯವಿಲ್ಲದೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸಿಎಂ ಮೌಖಿಕವಾಗಿ ಆದೇಶಿಸಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಎಜಿ 25-09-2019 ರಂದು ತಮ್ಮ ಅಭಿಪ್ರಾಯವನ್ನು ಸಿಬಿಐಗೆ ಹಸ್ತಾಂತರಿಸುವ ಮೊದಲು ರಾಜ್ಯದಲ್ಲಿ ತನಿಖೆ ನಡೆಸಬೇಕು ಎಂದು ವಿವರಿಸಿದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios