Thursday, June 5, 2025

ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಡಾ.ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ

by eesamachara
0 comment

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನವನ್ನು ಬುಧವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದು ಬಳಿಕ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಅಸ್ಪೃಶ್ಯತೆಯ ನಿವಾರಣೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಮಹಾನ್ ಧೀಮಂತ ನಾಯಕ. ದೇಶದ ಬಡಜನರಿಗೆ ಸಮಾನ ಅವಕಾಶ, ಅಭಿವ್ಯಕ್ತಿ ಸ್ವತಂತ್ರ್ಯ, ಶಿಕ್ಷಣದ ಹಕ್ಕು ನೀಡುವ ನಿಟ್ಟಿನಲ್ಲಿ ಸಂವಿಧಾನವನ್ನು ರಚಿಸಿದರು. ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಿ ಭಾರತವನ್ನು ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯಲು ಶ್ರಮಿಸಿದರು. ನಾವು ಅವರ ತತ್ವಾದರ್ಶ, ಸಿದ್ಧಾಂತವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ ಆಶಯಗಳನ್ನು ರಕ್ಷಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭ ಮಮತಾ ಗಟ್ಟಿ, ಪದ್ಮರಾಜ್.ಆರ್, ಪದ್ಮನಾಭ ನರಿಂಗಾನ, ಜೆ.ಅಬ್ದುಲ್ ಸಲೀಂ, ವಿಶ್ವಾಸ್ ಕುಮಾರ್ ದಾಸ್, ಬಿ.ಎಂ ಅಬ್ಬಾಸ್ ಅಲಿ, ಗಣೇಶ್ ಪೂಜಾರಿ, ಅಶ್ರಫ್ ಬಜಾಲ್, ಮುಹಮ್ಮದ್ ಕುಂಜತ್ತಬೈಲ್, ಜಯಶೀಲಾ ಅಡ್ಯಂತಾಯ, ಟಿ.ಹೊನ್ನಯ್ಯ, ಪದ್ಮನಾಭ ಅಮೀನ್, ಟಿ.ಕೆ ಸುಧೀರ್, ಸಬಿತಾ ಮಿಸ್ಕಿತ್, ಉದಯ್ ಆಚಾರ್ಯ, ಹೈದರ್ ಬೋಳಾರ್, ಶಾಂತಲಾ ಗಟ್ಟಿ, ಚಂದ್ರಕಲಾ ಜೋಗಿ,  ಸಲೀಮ್ ಮಕ್ಕ, ಯಶವಂತ್ ಪ್ರಭು, ನೀತ್ ಶರಣ್, ಲಕ್ಷ್ಮಣ್ ಶೆಟ್ಟಿ,  ಯೋಗೀಶ್ ನಾಯಕ್, ಮುಸ್ತಫಾ ಡಿ.ಎಂ, ಮ್ಲಲಿಕಾರ್ಜು ಕೋಡಿಕಲ್, ರವಿರಾಜ್ ಪೂಜಾರಿ ದಂಬೆಲ್, ಸಮರ್ಥ್ ಭಟ್ ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಶುಭೋದಯ ಆಳ್ವ ವಂದಿಸಿದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios