ಮಂಗಳೂರು: ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಮಾಸಿಕ ಸಭೆಯು ಜಿಲ್ಲಾಧ್ಯಕ್ಷರಾದ ಬಿ.ಎಂ ಅಬ್ಬಾಸ್ ಅಲಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರಗಿತು.
ಮುಂದಿನ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಕಾರ್ಮಿಕ ಕಾರ್ಡ್ ಗಳನ್ನು ಅಸಂಘಟಿತ ಕಾರ್ಮಿಕರಿಗೆ ಬ್ಲಾಕ್ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿತರಿಸುವ ಹಾಗೂ ಮುಂದಿನ ದಿನಗಳಲ್ಲಿ ಪ್ರತೀ ಬೂತ್ ಮಟ್ಟದಲ್ಲಿ ಅಸಂಘಟಿತ ಕಾರ್ಮಿಕರನ್ನು ಸಂಘಟಿಸುವಂತೆ ಪದಾಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಅಸಂಘಟಿತ ಪದಾಧಿಕಾರಿಗಳಾದ ಅರುಣ್ ಶೆಟ್ಟಿ, ನಿರಂಜನ್ ರೈ, ಬಶೀರ್ ಅಹ್ಮದ್, ಇಸ್ಮಾಯೀಲ್ ನಾಟೆಕಲ್, ರವೀಂದ್ರ, ರಿಚರ್ಡ್ ಮಿನೇಜಸ್, ಮುರಳೀಧರ ಶೆಟ್ಟಿ, ಪ್ರಶಾಂತ್, ಮಹಮ್ಮದ್ ಸಿರಾಜ್, ಪ್ರಶಾಂತ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.