ಮಂಗಳೂರು: ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲೆ ವತಿಯಿಂದ ನ.11 ರಂದು ಕರ್ನಾಟಕ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮ ನಗರದ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ 2:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ ಅಧ್ಯಕ್ಷತೆ ವಹಿಸಲಿದ್ದು, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಗೌರವ ಉಪಸ್ಥಿತಲಿರುವರು. ಮುಖ್ಯ ಅತಿಥಿಗಳಾಗಿ ರಾಜ್ಯ ಮುಖ್ಯಮಂತ್ರಿಯ ಕಾರ್ಯದರ್ಶಿ ನಸೀರ್ ಅಹ್ಮದ್, ಯೇನೆಪೋಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಯೇನೆಪೋಯ ಅಬ್ದುಲ್ಲಾ ಕುಂಞಿ, ದೇರಳಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿನ ಅಧ್ಯಕ್ಷ ಡಾ.ಯು.ಕೆ.ಮೋನು ಕಣಚೂರು, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್, ವಿವೃತ್ತ ಪೊಲೀಸ್ ಅಧಿಕಾರಿ ಜಿ.ಎ. ಬಾವ, ಉದ್ಯಮಿ ಇನಾಯತ್ ಅಲಿ, ಬಾವಾ ಫಿಶ್ ಮೀಲ್-ಆಯಿಲ್ ಕಂ. ಆಡಳಿತ ನಿರ್ದೇಶಕ ರಿಯಾಝ್ ಬಾವ, ಸೌದಿ ಅರೆಬಿಯಾದ ಎಕ್ಸ್ ಪರ್ಟೈಸ್ ಕಾಂಟ್ರಾಕ್ಟ್ ಕಂ. ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕರ್ನಿರೆ ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಪಶಸ್ತಿ ಪುರಸ್ಕೃತರಾದ ಹಾಜಿ ಅಬ್ದುಲ್ಲಾ ಪರ್ಕಳ, ಹಾಜಿ ಹಸನಬ್ಬ ಚಾರ್ಮಾಡಿ, ಮೀಫ್ ಹಾಗೂ ಜಿಲ್ಲಾ ರಾಜ್ಯೋತ್ಸವ ಪಶಸ್ತಿ ಪುರಸ್ಕೃತರಾದ ಅಬ್ದುಲ್ ಕರೀಂ ಬ್ಯಾರಿ ಅಡ್ಡೂರು, ಹಾಜಿ ಕೆ.ಪಿ ಅಹ್ಮದ್ ಪುತ್ತೂರು, ಹಾಜಿ ಎಂ.ಎಚ್. ಮಲಾರ್, ಬಿ.ಎಸ್.ಹಸನಬ್ಬ ಸೇರಿದಂತೆ ಒಟ್ಟು 18 ಮಂದಿಗೆ ಅಭಿನಂದಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
