Saturday, April 19, 2025

ಮಂಗಳೂರು | ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ಬೆಂಗಳೂರು ವಿದ್ಯಾರ್ಥಿಗಳಿದ್ದ ಬಸ್ಸು, ಕಾರು, ಕೆಎಸ್‌ಆರ್‌ಟಿಸಿ ಬಸ್ಸು ಸರಣಿ ಅಪಘಾತ

by eesamachara
0 comment

ಕುಂದಾಪುರಕ್ಕೆ ಪ್ರವಾಸ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರಿನ ವಿದ್ಯಾರ್ಥಿಗಳಿದ್ದ ಖಾಸಗಿ ಪ್ರವಾಸಿ ಬಸ್ಸು ಮತ್ತು ಕಾರು ಹಾಗೂ ಕೆಎಸ್ಆರ್‌ಟಿಸಿ ಬಸ್ಸುಗಳ ನಡುವೆ ಸರಣಿ ಅಪಘಾತ ನಡೆದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.
ಬೆಳಗಿನ ಜಾವ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ನಂತರ ಖಾಸಗಿ ಟೂರಿಸ್ಟ್ ಬಸ್‌ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎನ್ನಲಾಗಿದೆ.
ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದೆ. ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆಗೆ ಉರುಳಿದೆ. ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios