ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್, ಪರಿಶಿಷ್ಟ ಘಟಕದ ವತಿಯಿಂದ, ಡಾ. ಭೀಮ್ ರಾವ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನ ಕಾರ್ಯಕ್ರಮ ಇತ್ತೀಚಿಗೆ ಉರ್ವಾಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಈ ಸಂದರ್ಭ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜೆ.ಆರ್ ಲೋಬೊ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಬಿ ಸಾಲ್ಯಾನ್, ವಿರೋಧ ಪಕ್ಷದ ನಾಯಕ ಅನಿಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರ್, ನಗರ ಬ್ಲಾಕ್ ಪರಿಶಿಷ್ಟ ಘಟಕದ ದಿನೇಶ್ ಬಲಿಪತೋಟ, ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಚೇತನ್, ನಗರ ಪಾಲಿಕೆ ಸದಸ್ಯ ಚೇತನ್, ಮಾಜಿ ಉಪ ಮೇಯರ್ ರಜನೀಶ್ ಕಾಪಿಕಾಡ್, ಮುಖಂಡರಾದ ಮೋಹನಾಂಗಯ್ಯ ಸ್ವಾಮಿ, ಸುನಿಲ್ ಬಜಿಲಕೇರಿ, ಚಂದ್ರ ಕುಮಾರ್, ಪ್ರೇಮ್ ಬಲ್ಲಾಳ್ ಬಾಗ್, ವಾರ್ಡ್ ಅಧ್ಯಕ್ಷರಾದ, ಟಿ. ಸಿ. ಗಣೇಶ್, ಹ್ಯಾರಿಸ್, ರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು .
ಕಿರಣ್ ಕುಮಾರ್ ಕೊಡಿಯಾಲ್ ಬೈಲ್ ಕಾರ್ಮಕ್ರಮ ನಿರೂಪಿಸಿದರು.