Saturday, June 7, 2025

ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಸ್ವಾಮೀಜಿ ವಿರುದ್ಧ FIR ದಾಖಲು

by eesamachara
0 comment
Marularadhya Swamiji

ಗುಲ್ಬರ್ಗಾ: ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ ಎಂದು ವಕ್ಫ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜಿಲ್ಲೆಯಲ್ಲಿ ‘ವಕ್ಫ್ ಹಠಾವೋ ದೇಶ ಬಚಾವೋ’ ಎಂದು ಆಯೋಜಿಸಲಾದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೊಲೀಸರ ಮುಂದೆಯೇ, “ಜೀವ ಕೊಡುವುದಕ್ಕೂ, ಜೀವ ತೆಗೆಯುವುದಕ್ಕೂ ಸಿದ್ಧರಿದ್ದೀವಿ ಹುಷಾರ್. ಯುವಕರ ಮನೆಯಲ್ಲಿ ತಲ್ವಾರ್ ಇವೆ. ಎಲ್ಲರ ಮನೆಯಲ್ಲಿ ಎಲ್ಲ ಇದೆ. ಯಾರ್ ಬರುತ್ತಾರೆ ಅವರನ್ನು ತಲ್ವಾರ್‌ನಿಂದ ಕಡಿಯುತ್ತೇವೆ. ಇನ್ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡೋಣ” ಎಂದು ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸ್ವಾಮೀಜಿಯ ಹೇಳಿಕೆಯ ಆಧಾರದ ಮೇಲೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಕಾಯಿದೆ 299, 353/2 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶವಿಟ್ಟುಕೊಂಡಿದ್ದಾರೆ ಎಂದು ಎಫ್‌ಐಆರ್ ದಾಖಲಾಗಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios