Thursday, April 10, 2025

ಇಂದಿರಾ ಗಾಂಧಿ ಜನ್ಮದಿನ| ನ.19ರಂದು ಮಂಗಳೂರಿನಲ್ಲಿ ‘ಸೌಹಾರ್ದತಾ ನಡಿಗೆ’

by eesamachara
0 comment
indiragandhi

ಮಂಗಳೂರು: ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಜನ್ಮದಿನದ ಪ್ರಯುಕ್ತ ಇಂದಿರಾ ಗಾಂಧಿ ಜನ್ಮದಿನ ಆಚರಣಾ ಸಮಿತಿ ವತಿಯಿಂದ ನ.19 ರಂದು ಮಂಗಳೂರಿನಲ್ಲಿ ‘ಸೌಹಾರ್ದತಾ ನಡಿಗೆ’ ಹಮ್ಮಿಕೊಳ್ಳಲಾಗಿದೆ.

ಸೌಹಾರ್ದತಾ ನಡಿಗೆ ಅಂದು ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಹಾದ್ವಾರದಿಂದ ಪ್ರಾರಂಭವಾಗಿ ಮಣ್ಣಗುಡ್ಡೆ ಗುರ್ಜಿವರೆಗೆ ನಡೆಯಲಿದೆ.

ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ವಿವಿಯ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರದ ವಿಶ್ರಾಂತ ಸಹಪ್ರಾಧ್ಯಾಪಕ, ನಿರ್ದೇಶಕಿ ಡಾ.ಅನಿತಾ ರವಿಶಂಕರ್ ಹಾಗೂ ಸಾಮಾಜಿಕ ಕಾರ್ಯಕರ್ತ, ಚಿಂತಕ ಎಂ.ಜಿ.ಹೆಗ್ಡೆ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios