Friday, April 18, 2025

ಮಂಗಳೂರು| ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಲು ಬಿಡಲಾರೆವು: SKSSF ಎಚ್ಚರಿಕೆ

by eesamachara
0 comment

ಮಂಗಳೂರು: ಯಾವ ಕಾರಣಕ್ಕೂ ವಕ್ಫ್ ಆಸ್ತಿಯನ್ನು ಬಿಟ್ಟುಕೊಡುವುದಿಲ್ಲ. ತಿದ್ದುಪಡಿ ಮಸೂದೆಯನ್ನು ಕೈ ಬಿಡುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ವಕ್ಫ್ ಆಸ್ತಿ ತಿದ್ದುಪಡಿ ಮಸೂದೆಯ ವಿರುದ್ಧ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ನಡೆಸಿದ ಪ್ರತಿಭಟನೆಯಲ್ಲಿ ಎಸ್ಕೆಎಸೆಸ್ಸೆಫ್ ದ.ಕ.ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ.

ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನ್ ಫೈಝಿ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿ, ಮುಸ್ಲಿಂ ಪೂರ್ವಜರಿಂದ ಪಾರಂಪರ್ಯವಾಗಿ ಬಂದ ವಕ್ಫ್ ಆಸ್ತಿಯನ್ನು ಕೇಂದ್ರ ಸರಕಾರವು ತಿದ್ದುಪಡಿ ಮಸೂದೆಯ ಮೂಲಕ ಕಬಳಿಸಲು ಹುನ್ನಾರ ನಡೆಸುತ್ತಿದೆ. ವಕ್ಫ್ ಅಲ್ಲಾಹನ ಸೊತ್ತಾಗಿದೆ. ವಕ್ಪ್ ಆರಾಧನಾ ಕರ್ಮವಾಗಿದೆ. ಅದನ್ನು ಉದ್ದೇಶಿತ ಹೊರತು ಬೇರೆಯದಕ್ಕೆ ಬಳಕೆ ಮಾಡಲು ಸಾಧ್ಯವಿಲ್ಲ. ಸರಕಾರವು ವಕ್ಫ್ ಆಸ್ತಿಯನ್ನು ಕಬಳಿಸಲು ನಡೆಸುತ್ತಿರುವ ಹುನ್ನಾರಕ್ಕೆ ಸ್ಪಷ್ಟ ವಿರೋಧವಿದೆ ಎಂದು ಹೇಳಿದರು.

“ಕೇಂದ್ರ ಸರಕಾರವು ವಕ್ಸ್ ಆಸ್ತಿಯ ಸುಧಾರಣೆ, ಅಭಿವೃದ್ಧಿಯ ನೆಪದಲ್ಲಿ ಕಸಿದುಕೊಳ್ಳಲು ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದೆ. ಈ ಮಸೂದೆಯು ಗೊಂದಲದಿಂದ ಕೂಡಿದೆ. ಅನುಮಾನ ಮೂಡಿಸುತ್ತಿದೆ. ಆತಂಕಕ್ಕೆ ಕಾರಣವಾಗಿದೆ.

ತಿದ್ದುಪಡಿ ಮಸೂದೆಯ ಮೂಲಕ ಅದನ್ನು ಸಾರ್ವಜನಿಕಗೊಳಿಸಲು ಬಿಡಲಾರೆವು. ಮುಸ್ಲಿಮರ ಹಿತಕಾಪಾಡುವುದಾಗಿ ಹೇಳಿಕೊಳ್ಳುವ ಪಕ್ಷಗಳ ನಾಯಕರು ಮತ್ತು ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಧ್ವನಿ ಎತ್ತಬೇಕು. ತಿದ್ದುಪಡಿ ಮಸೂದೆಯ ಮೂಲಕ ಅದನ್ನು ಸಾರ್ವಜನಿಕಗೊಳಿಸಲು ಬಿಡಲಾರೆವು. ಮುಸ್ಲಿಮರ ಹಿತಕಾಪಾಡು ವುದಾಗಿ ಹೇಳಿಕೊಳ್ಳುವ ಪಕ್ಷಗಳ ನಾಯಕರು ಮತ್ತು ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಧ್ವನಿ ಎತ್ತಬೇಕು” ಎಂದು ಎಸ್ಕೆಎಸೆಸ್ಸೆಫ್ ದ.ಕ.ಜಿಲ್ಲಾಧ್ಯಕ್ಷ ಮೌಲಾನಾ ಅಝೀಝ್ ದಾರಿಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಅನೀಸ್ ಕೌಸರಿ ಮಾತನಾಡಿ ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಮುಹಮ್ಮದ್ ರಫೀಕ್ ಹುದವಿ, ಇರ್ಶಾದ್ ದಾರಿಮಿ ಮಿತ್ತಬೈಲ್, ಅಬ್ದುಲ್‌ ಖಾದರ್ ದಾರಿಮಿ ಕುಕ್ಕಿಲ, ಅಬ್ದುಲ್ ರಶೀದ್ ಹಾಜಿ ಉಳ್ಳಾಲ, ಮುಹಮ್ಮದ್ ಮುಸ್ಲಿಯಾರ್ ಮುಂಡೋಲೆ, ಅಬ್ದುಲ್ ರಶೀದ್ ರಹ್ಮಾನಿ, ಇಸ್ಮಾಯಿಲ್ ಯಮಾನಿ ತಿಂಗಳಾಡಿ, ಅಝಿಝ್ ಮಲಿಕ್, ಇಕ್ಬಾಲ್ ಮುಲ್ಕಿ, ಅಶ್ರಫ್ ಮೂಡುಬಿದಿರೆ, ಯಾಸೀರ್ ಕಕ್ಕಿಂಜೆ, ಆರೀಫ್ ಕಮ್ಯೂಜೆ, ಜಲೀಲ್ ಬದ್ರಿಯಾ, ಅಬೂಬಕ್ಕರ್ ಮಂಗಳ, ನಿಝಾರ್ ಬೆಂಗ್ರೆ ಮೊದಲಾದವರು ಭಾಗವಹಿಸಿದ್ದರು. ಸೈಯದ್ ಅಮೀರ್ ತಂಙಳ್ ದುಆಗೈದರು. ಹಾರೀಶ್ ಕೌಸರಿ ಸ್ವಾಗತಿಸಿದರು. ಅಬೂಸ್ವಾಲಿಹ್ ಫೈಝಿ ವಂದಿಸಿದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios