ಬೆಂಗಳೂರು: ಕರ್ನಾಟಕ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಸೋಲನುಭವಿಸಿರುವುದಕ್ಕೆ ನಮಗೆ ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರೂ ಕ್ಷೇತ್ರಗಳ ಸೋಲಿನ ಬಗ್ಗೆ ಎರಡೂ ಪಕ್ಷಗಳ ನಾಯಕರು ಚರ್ಚೆ ಮಾಡುತ್ತೇವೆ. ಕರ್ನಾಟಕದಲ್ಲಿ ಮೂರೂ ಕ್ಷೇತ್ರಗಳಲ್ಲೂ ನಮಗೆ ಹಿನ್ನಡೆ ಆಗಿದೆ. ಶಿಗ್ಗಾಂವಿ, ಸಂಡೂರಿನಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇತ್ತು. ಆದರೆ, ನಿರಾಸೆ ಆಗಿದೆ. ಸೋಲಿಗೆ ಕಾರಣ ಮತ್ತು ಲೋಪಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.